ಮಹಾದೇವ ಅವರ ಹಾಡುಗಳು ಮನಸ್ಸಿಗೆ ಮತ್ತು ದೇಹಕ್ಕೆ ಯಾವಾಗಲೂ ಶಾಂತಿ ಮತ್ತು ಸಂತೋಷವನ್ನು ತರುತ್ತವೆ. ಯಾವುದೇ ಸನ್ನಿವೇಶದಲ್ಲಿ ಈ ಸಾಹಿತ್ಯವನ್ನು ಕೇಳಿದರೆ ಮನಸ್ಸಿಗೆ ಎಷ್ಟು ತಂಪು, ಕಿವಿಗೆ ತಂಪು.
ಚಂದ್ರಚೂಡ ಶಿವಶಂಕರ ಪಾರ್ವತಿ Chandrachooda Shivashankara Parvathi Kannada Lyrics
ಚಂದ್ರಚೂಡ ಶಿವಶಂಕರ ಪಾರ್ವತಿ ರಮಣನೆ ನಿನಗೆ ನಮೋ ನಮೋ || ಪ ||
ಸುಂದರ ಮೃಗಧರ ಪಿನಾಕ ಧನುಕರ ಗಂಗಾ ಶಿರ
ಗಜಚರ್ಮಾಂಬರಧರ ನಮೋ ನಮೋ || ಅ ಪ ||
ನಂದಿವಾಹನಾನಂದದಿಂದ ಮೂಜಗದಿ ಮೆರವೆ ನೀನೇ
ಅಂದು ಅಮೃತ ಘಟದಿಂದುದಿಸಿದ ವಿಷ ತಂದು ಭುಜಿಸಿದವ ನೀನೇ
ಕಂದರ್ಪನ ಕ್ರೋಧದಿಂದ ಕಣ್ತೆರೆದು ಕೊಂದ ಉಗ್ರನು ನೀನೇ
ಇಂದಿರೇಶ ಶ್ರೀ ರಾಮನ ಪಾದವ ಚಂದದಿ ಪೊಗಳುವ ನೀನೇ || ೧ ||
ಬಾಲಮೃಕಂಡಜನ ಕಾಲನು ಎಳೆವಾಗ ಪಾಲಿಸಿದವ ನೀನೇ
ವಾಲಯದಿ ಕಪಾಲ ಪಿಡಿದು ಭಿಕ್ಷೆ ಬೇಡೋ ದಿಗಂಬರ ನೀನೇ
ಕಾಲಕೂಟವ ಪಾನಮಾಡಿದ ನೀಲಕಂಠನು ನೀನೇ
ಜಾಲ ಮಾಡಿದ ಗೋಪಾಲನೆಂಬ ಹೆಣ್ಣಿಗೆ ಮರುಳಾದವ ನೀನೇ || ೨ ||
ಧರೆಗೆ ದಕ್ಷಿಣ ಕಾವೇರಿತೀರ ಕುಂಭಪುರವಾಸನು ನೀನೇ
ಕೊರಳೋಳು ಭಸ್ಮ ರುದ್ರಾಕ್ಷಿಯ ಧರಿಸಿದ ಪರಮ ವೈಷ್ಣವ ನೀನೆ
ಕರದಲಿ ವೀಣೆಯ ನುಡಿಸುವ ನಮ್ಮ ಉರಗಭೂಷಣನು ನೀನೇ
ಗರುಡಗಮನ ಶ್ರೀ ಪುರಂದರವಿಠಲಗೆ ಪ್ರಾಣಪ್ರಿಯನು ನೀನೆ || ೩||
Comments
Post a Comment