ಗಜೇಂದ್ರ ಮೋಕ್ಷ Gajendra Moksha Kannada Lyrics

ಗಜೇಂದ್ರ ಮೋಕ್ಷ Gajendra Moksha Kannada Lyrics. Gajendra Moksha Stotra is one of the most important prayers addressed to Lord Vishnu. Gajendra Moksham stotram can be seen in Srimad Bhagavatam. SB. 8.3.2-29. Below is the lyrics of Gajendra Moksha stotra in Kannada language. 

ಗಜೇಂದ್ರ ಮೋಕ್ಷ Gajendra Moksha Kannada Lyrics

ನಾರಾಯಣ ಕೃಷ್ಣ

ಶ್ರೀನಾಥ ಪಾರ್ವತಿಯ ನಾಥ ಶರಣೆಂಬೆ |
ವಾಣಿ ಭಾರತಿಯ ಗಜಮುಖನ ಬಲಗೊಂಬೆ ||
ನಾನು ಬಲ್ಲಷ್ಟು ಪೇಳುವೆನು ಈ ಕಥೆಯ |
ಶ್ರೀನಾಥ ಗಜರಾಜಗೊಲಿದ ಸಂಗತಿಯ || ೧ ||

ಭಪನ್ನ ದೇಶ ದೇಶದ ರಾಯರೊಳಗೆ |
ಉತ್ತಮದ ದೇಶ ಗೌಳಾದೇಶದಲ್ಲಿ ||
ವಿಷ್ಣು ಭಕ್ತರೊಳು ಇಂದ್ರದ್ಯುಮ್ನ ನೃಪನು |
ಮತ್ತೆ ಭೂಸುರರ ಪಾಲಿಸುತ್ತಿದ್ದ ತಾನು || ೨ ||

ಚಿತ್ತದಲ್ಲಿ ನರಹರಿಯ ನೆನೆದು ಚಿಂತಿಸುತ |
ಪುತ್ರಮಿತ್ರಾದಿ ಬಂಧುಗಳ ವರ್ಜಿಸುತ ||
ಧ್ಯಾನದಲಿ ನರಹರಿಯ ನೆನೆದು ಚಿಂತಿಸುತ |
ಆನೆಕುದುರೆಯ ರಾಜ್ಯಗಳನು ತ್ಯಜಿಸುತ್ತ || ೩ ||

ಸರ್ಪಶಯನನ ಧ್ಯಾನದಲ್ಲಿದ್ದ ತಾನು |
ಮತ್ತೆ ತ್ರಿಕೊಟಪರ್ವತಕಾಗಿ ಬಂದು ||
ನಾಗಶಯನನ ಧ್ಯಾನದಲ್ಲಿದ್ದ ತಾನು |
ಮೇರುಮಂದರದ ಸಮೀಪಕ್ಕೆ ಬಂದು ||೪ ||

ಸಿದ್ದ ಕಿನ್ನರರು ಗಂಧರ್ವರಿಗೆ ಸ್ಥಾನ |
ಎದ್ದೆದ್ದು ಕುಣಿವ ಮೃಗಖಗಗಳ ಸೀಮ ||
ಎತ್ತ ನೋಡಲು ನಾಲ್ಕು ದೇಶ ವಿಸ್ತೀರ್ಣ |
ಸುತ್ತ ಸುವರ್ಣಮಯ ವಸ್ತುಗಳ ಧಾಮ || ೫ ||

ಹಲವು ನದಿ ಹಲವು ಕೊಳ ಹಲವು ಸರೋವರದಿ |
ಹಲವು ಪರಿ ಪುಷ್ಪಗಳು ಮೆರೆವ ಅಳಿಕುಲದಿ ||
ಚೆಲುವ ಗಂಧರ್ವ ಕಿನ್ನರಿಯರ ಸ್ಥಾನ |
ಕುಣಿವ ನವಿಲುಗಳ ಗಿಳಿಕೋಗಿಲೆಯ ಗಾನ || ೬ ||

ಬಂದು ನದಿಯಲ್ಲಿ ಸ್ನಾನವನ ಮಾಡಿದನು |
ಚಂದ ದಿಕ್ಕಿದನು ದ್ವಾದಶ ನಾಮಗಳನು ||
ಸಂಧ್ಯಾವಂದನೆ ಮಾಡಿ ಪದ್ಮ ಆಸನದಿ |
ಇಂದಿರಾಪತಿಯ ಮನದೊಳಗಿರಿಸಿ ತಾನು || ೭ ||

ಅಂದಾಗ ಆಯೆಡೆಗೆ ಅಗಸ್ತ್ಯಮುನಿ ಬಂದ |
ನಿಂದಿರ್ದು ವಂದನೆಯ ಮಾಡಲಿಲ್ಲೆಂದ ||
ಎಂದೆನುತ ಮನದಿ ಕೋಪಿಸುತ ಶಾಪಿಸಿದ |
ಕುಂಜರದ ರೂಪಾಗಿ ಜನಿಸು ಹೋಗೆಂದ || ೮ ||

ತಪ್ಪುಂಟು ಮಹರ್ಷಿಯೆ ಕೇಳು ಬಿನ್ನಪವ |
ವಿಶ್ಯಾಪ ಎಂದಿಗಾಗುವುದೆನುತ ಪೇಳು ||
ವಿಷ್ಣು ಚಕ್ರವು ಬಂದು ನಿನ್ನ ಸೋಕುತಲೆ |
ವಿಶ್ಯಾಪ ಅಂದಿಗಾಗುವುದೆಂದು ಪೇಳೆ ||
ವಿಷ್ಣು ಚಕ್ರವು ಬಂದು ನಿನ್ನ ಸೋಕುತಲೆ |
ವಿಶ್ಯಾಪ ಅಂದಿಗಾಗುವುದೆಂದು ಪೇಳೆ || ೯ ||

ಜ್ಞಾನವಡಗಿದವು ಅಜ್ಞಾನ ವಾವರಿಸೆ |
ಸೂರ್ಯ ಮುಳುಗಿದನು ಕತ್ತಲೆ ಮುಸುಕಂತೆ ||
ಧ್ಯಾನಿಸುತ ಹಿಂದುಮುಂದಾಗ ಕುಳಿತಿರಲು |
ಅನೆಯಾದನು ನೃಪನು ಆ ಕ್ಷಣದಿ ತಾನು || ೧೦ ||


ಮೇರುಪರ್ವತ ಕದಲಿ ಇಳಿದು ಬರುವಂತೆ |
ಮೇಲುಮದ ಕೀಳು ಮದ ಸುರಿಯೆ ಕುಂಭದಲಿ |
ಕಾಡಾನೆ ಕರಿಯಾನೆ ಮರಿಯಾನೆ ಸಹಿತ |
ಕೂಡಿಕೊಂಡೆಲ್ಲ ಒಂದಾಗಿ ಸಂಭ್ರಮಿಸಿ ||
ಕಾಡಾನೆಯಾಳಗ್ಹಲವು ಮಕ್ಕಳನೆ ಪಡೆದು |
ಕಾನನದೊಳಗೆ ಸಂಚರಿಸುತ್ತಿದ್ದ ತಾನು || ೧೧ ||

ಘಟ್ಟ ಬೆಟ್ಟಗಳ ಹತ್ತುತಲೆ ಇಳಿಯುತಲೆ |
ಹಿಟ್ಟು ಹಿಟ್ಟಾಗಿ ಕಲ್ಮರವ ತುಳಿಯುತಲೆ ||
ದಟ್ಟ ಡವಿಯೊಳಗೆ ಸಂಚರವ ಮಾಡುತಲೆ |
ಬತ್ತಿದವು ಕೆರೆತೊರೆಯು ಬೇಸಗೆಯು ಬರಲು || ೧೨ ||

ಕಂಡಕಂಡಲ್ಲಿ ಏರುತಲಿ ಇಳಿಯುತಲಿ |
ತುಂಡುತುಂಡಾಗಿ ಗಿಡಮರವ ಮುರಿಯುತಲಿ ||
ತಂಡತಂಡದಲ್ಲಿದ ತನ್ನ ಸತಿ ಸುತರು |
ಬೆಂಡಾಗಿ ಹಸಿವು ತೃಷೆಯಿಂದ ಬಳಲಿದರು || ೧೩ ||

ಬಾಳೆ ಕಿತ್ತಳೆನಿಂಬೆ ಚೂತ ಮಾದಲವು
ದಾಳಿಂಬ ದ್ರಾಕ್ಷಿಖರ್ಜೂರ ಪೇರಳೆಯು ||
ಮೇಲಾದ ಫಲಪುಷ್ಪದಿಂದ ಶೋಭಿಸಲು |
ತಾವರೆ ಕೊಳವೊಂದ ಕಂಡ ಗಜರಾಜ || ೧೪ ||

ನವರತ್ನ ಮುತ್ತು ಮಾಣಿಕ್ಯ ಸೋಪಾನ |
ಕೊಳದ ಸುತ್ತಲು ಮುತ್ತಿ ಚಕ್ರವಾಕಗಳು ||
ನಲಿಯುತಿವೆ ಹಲುವ ಹಕ್ಕಿಗಳು ಹಂಸಗಳು |
ಪರಿಮಳಿಸುವಾ ಕೊಳವೆ ಹೊಕ್ಕ ಗಜರಾಜ ||೧೫ ||

ಹೊಡೆಯುತಲಿ ಬಡೆಯುತಲಿ ಕುಡಿಯುತಲಿ ನೀರ |
ಮಡುವಿನಲ್ಲಿ ಚೆಲ್ಲುತಲಿ ನಲಿದುವೊಂದಾಗಿ ||
ಕಾಡಾನೆ ಕರಿಯಾನೆ ಮರಿಯಾನೆ ಸಹಿತ |
ಕೂಡಿದೋಂಡಿರಲಿಂತು ಸಮ್ಭ್ರದುದಿ ಜಲದಿ || ೧೬ ||

ಮುನಿಯು ಶಾಪದಲೊಂದು ಮಕರಿ ಮಡುವಿನೊಳು |
ಹಲವುಕಾಲದಿ ತಪಿಸಿ ಜೀವಿಸುತ್ತಿರಲು ||
ಮದಗಜವು ಪೊಕ್ಕು ಮಡುವನೆ ಕಲುಕು ತಿರಲು
ತಡೆಯದಾ ಮಕರಿ ಹಿಡಿಯಿತು ಕರಿಯ ಕಾಲು || ೧೭ ||

ಅತ್ತಿತ್ತ ನೋಡಿದನು ಸುತ್ತ ನೋಡಿದನು |
ಎತ್ತ ನೋಡಿದರೂ ಬಿಡದು ಆ ಮಕರಿ ಕಾಲು ||
ಎಳೆದೊಮ್ಮೆ ನೋಡಿದನು ಸೆಳದೊಮ್ಮೆ ನೋಡಿದನು |
ಹೇಗೆ ನೋಡಿದರು ಬಿಡದು ಆ ಮಕರಿ ಕಾಲು || ೧೮ ||

ತನ್ನ ಸತಿ ಸುತರೆಲ್ಲ ಸೆಳದರೊಂದಾಗಿ |
ತಮ್ಮ ಕೈಲಾಗದೆಂದೆನುತ ತಿರುಗಿದರು |
ಎನ್ನ ಪುಣ್ಯದ ಫಲವು ಹೋಗಿ ನೀವೆಂದ |
ದುಮ್ಮಾನದಿಂದ ದೊರದಲ್ಲಿದ್ದರವರು || ೧೯ ||

ಕಚ್ಚುತಲಿ ಸೆಳೆಯುತಲಿ ಆ ಮಕರಿ ಕಾಲು |
ರಕ್ತಮಯವಾಗಿ ತುಂಬಿತು ಕೊಳದ ನೀರು |
ಅಕ್ಕಟಾ ಎನಗಿನ್ನು ಗತಿಯಾರು ಎನುತ
ದಿಕ್ಕುಗೆಟ್ಟಂತೆ ಮೊರೆಯಿಟ್ಟ ಗಜರಾಜ || ೨೦ ||

ಅಚ್ಯುತಾನಂತ ಶ್ರೀಹರಿಯೆನ್ನ ಕಾಯೋ |
ಸಚ್ಚಿದಾನಂದ ಸರ್ವೇಶ್ವರನೆ ಕಾಯೋ ||
ಭಕ್ತವತ್ಸಲನೆ ಭವಭಂಜನನೆ ಕಾಯೋ |
ಕಷ್ಟಪಡುತೇನೆ ಕರುಣಿಸಿ ಕರುಣಿ ಕಾಯೋ || ೨೧ ||


Gajendra Moksha Kannada Lyrics



ಎಂಭತ್ತು ನಾಲ್ಕು ಲಕ್ಷ ಜೀವರಾಶಿಗಳಾ |
ಇಂಬಿಟ್ಟ್ ಸಲಹೋ ಜಗದೀಶ್ವರನ ಕಾ ಯೋ |
ಜಂಗಮ ಸ್ಥಾವರಗದೊಳಗೆ ಪರಿಪೂರ್ಣ |
ಎಂಬಂಥ ನೀ ಎನ್ನ ಬಂಧನ ಬಿಡಿಸೊ || ೨೨ ||

ಈರೇಳು ಭುವನವನು ಹೃದಯದೊಳಗಿಟ್ಟೆ |
ಕಾದುಕೋ ಎಂದು ಗಜರಾಜ ವೊರೆಯಿಟ್ಟ |
ಅಹಾರ ನಿದ್ರೆ ಇಲ್ಲದೆ ಸಾವಿರ ವರುಷ|
ಬಹಳ ನೊದೆನೆ ಸ್ವಾಮಿ ಕಾಯೋ ಬಾಯೆಂದ || ೨೩ ||

ವೇದಗಳ ಕದ್ದು ಕೊಂಡೊಯ್ದ ದಾನವನ |
ಸಾಧಿಸಿದೆ ಭೇಧಿಸಿದೆ ಅವನ ಛೇದಿಸಿದೆ ||
ಆದಿ ನಿಗಮವ ತಂದು ಕಮಲಜನಿಗಿತ್ತೆ |
ವೇದಾಂತವೇದ್ಯ ಮತ್ಸ್ಯಾವತಾರ ಶರಣು || ೨೪ ||

ಸುರಾಸುರರು ಪಾಲ್ಗಡಲ ಮಥಿಸುತಿರಲು |
ಮರವೈರಿ ಹಾಸಿಗೆಯ ಹುರಿ ಮಾಡಿಕೊಂಡು |
ಭರದಿ ಮಂದರಗಿರಿಯು ಇಳಿಯುತಿರೆ ಬಂದು |
ಗಿರಿಯನೆತ್ತಿದ ಕೂರ್ಮ ಹರಿ ನಿನಗೆ ಶರನು || ೨೫ ||

ಸುರುಳಿ ಸುತ್ತಿದ ಭೂಮಿ ದಾಡೆಯಲಿ ತಂದೆ |
ದುರುಳ ಹಿರಣ್ಯಾಕ್ಷನನು ಬೇಗದಲಿ ಕೊಂದೆ |
ಧರಣಿದೇವಿಯನು ಸದಮಲದೊಳು ಗೆದ್ದೆ |
ವರಹಾವತಾರ ಶ್ರೀಹರಿ ನಿನಗೆ ಶರಣು || ೨೬ ||

ಬಾಲಕನು ಕರೆಯಲಿಕೆ ಕಂಬದಲಿ ಬಂದೆ |
ಸೀಳಿ ರಕ್ಕಸನ ಕರುಳಿನ ಮಾಲೆ ಹಾಕಿದೆ ||
ಶೀಲ ಪ್ರಲ್ಹಾದನಿಗೆ ಅಭಯವನು ಇತ್ತೆ |
ಶ್ರೀಲಕ್ಷ್ಮಿಪೊಡನಿದ್ದ ನರಸಿಂಹ ಶರನು || ೨೭ ||

ಬಲಿಯ ದಾನವ ಬೇಡಿ ಬ್ರಹ್ಮಚಾರಿಯಾಗಿ |
ನೆಲವನೆಲ್ಲವ ಮೂರು ಅಡಿಮಾಡಿ ಅಳೆದೆ ||
ಅಲೆದ ಪಾದದಲಿ ಭಾಗಿರಥಿಯ ತಂದೆ |
ಚೆಲುವೆ ವಾಮನಮೂರ್ತಿ ತ್ರಿವಿಕ್ರಮನೆ ಶರನು || ೨೮ ||

ದುಷ್ಟ ಕ್ಷತ್ರಿಯ ನೃಪರ ಕುಲವ ಸಂಹರಿಸಿ |
ರಕ್ತದಲಿ ಸ್ನಾನತರ್ಪಣವ ನೀ ಕೋಟ್ಟೆ
ಮತ್ತೆ ವೇದಾಂತ ಶಾಸ್ತ್ರಗಳ ನೆರೆ ಓದಿ |
ವಿಪ್ರ ಭಾರ್ಗವರಾಮ ಹರಿ ನಿನಗೆ ಶರಣು || ೨೯ ||

ಹರನ ಬಿಲ್ಲನೆ ಮುರಿದು ಧರಣಿಜೆಯ ತಂದೆ |
ದುರುಳ ರಾವಣಶಿರಗಳ ಹತ್ತು ತರಿದೆ |
ವರ ವಿಭೀಷಣಗವನ ರಾಜ್ಯ ಗಳನಿತ್ತೆ ||
ಶರಣರಕ್ಷಕ ಸೀತಾಪತಿ ರಾಮ ಶರಣು || ೩೦ ||

ಮಧುರೆಯಲಿ ಹುಟ್ಟಿ ಗೋಕುಲದಲಿ ಬೆಳೆದೆ |
ತರಳತನದಲಿ ಹಾಲು ಬೆಣ್ಣೆಗಳ ಮೆದ್ದೆ |
ತರುವ ಕಾಯುತ ಕೊಂದೆ ಹಲವು ರಕ್ಕಸರ |
ಬಲರಾಮಕೃಷ್ಣ ಗೋಪಾಲಕನೆ ಶರಣು || ೩೧ ||

ತ್ರಿಪುರಸತಿಯರ ವ್ರತ ಅಪಹರಿಸಿದವನೆ |
ಪೃಥವಿಯುಳು ಅಶ್ವತ್ಥನಾಗಿ ಮೆರೆದವನೆ ||
ಬಿಸಿಗಣ್ಣ ಹರಗೆ ಅಂಬಾಗಿ ನಿಂತವನೆ ||
ಪಶುಪತಿಪ್ರೀಯ ಬೌದ್ಧ ಅವತಾರ ಶರಣು || ೩೨ ||

ವರ್ಣಾಶ್ರಮಗಳೆಲ್ಲ ಒಂದಾಗಿ ಇರಲು |
ಬಿನ್ನಾಣದಿಂದ ತುರುಗವನೇರಿಕೊಂಡು ||
ಬನ್ನ ಪಡಿಸುತ ಹಲವು ಪಾತಕರ ಕೊಂದೆ |
ಬ್ರಹ್ಮಸ್ವರೂಪ ಕಲ್ಕ್ಯವತಾರ ಶರಣು || ೩೩ ||

ಅರಿಯದಂತಿರದೆ ಅಚ್ಯುತ ರಕ್ಶಿಸೆನ್ನ |
ಮರೆಯೆ ದೆಂದಿರದೆ ಮಾಧವ ರಕ್ಷಿಸೆನ್ನ ||
ಕೆಳೆನೆಂದೆನದೆ ಕೇಶವ ರಕ್ಷಿಸೆನ್ನ |
ಕಾಣಿನೆಂದೆನದೆ ಕರುಣಿಸಿ ರಕ್ಷಿಸೆನ್ನ || ೩೪ ||

ಕಾಯಕಂಜದ ಪ್ರಾಣ ಹೋಗುತಿದೆ ಮುನ್ನ |
ಯಾವಾಗ ಹರಿಬಂದು ಕಾಯ್ವನೋ ಎನ್ನ |
ಚೇರಿದನು ಕೂಗಿ ಮೊರೆಯಿಟ್ಟ ಗಜರಾಜ |
ದಾನವಾಂತಕನು ಕಿವಿಗೋಟ್ಟು ಕೇಳಿದನು || ೩೫ ||

ಕ್ಷಿರಾಬ್ಧಿಯಲಿ ವೈಕುಂಠ ನೆಲಸಿದ್ಧ |
ಶೇಷನಾ ಹಾಸಿಗೆಯ ಮೇಲೆ ಕುಳ್ಳಿರ್ದ ||
ಶ್ರೀಲಕ್ಷ್ಮೀ ಸಮ್ಮೇಳನದಿಂದ ಒಪ್ಪಿರಲು |
ಆಲಯಿಸಿ ಕೇಳಿದನೆ ಅಜನನೆ ಅಜನ ಪೆತ್ತವನು || ೩೬ ||

ಶಂಕಚಕ್ರಗಳಿಲ್ಲವೆಂದು ಶಂಕಿಸದೇ |
ಬಿಂಕದಿಂ ಗರುಡನ್ನ ಪಗಲೇರಿಸಿಕೊಳದೆ ||
ಪಂಕಜಾಕ್ಷಿಯ ಕೂಡ ತಾನು ಉಸಿರಿಸದೆ ||
ಪಂಕಜನಾಭ ಬಂದನು ಕೊಳದ ಕಡೆಗೆ || ೩೭ ||

ಸಜ್ಜೆ ಉಪ್ಪರಿಗೆಯಿಂದಿಳಿದು ಬರುವಾಗ |
ವಜ್ರಕುಂಡಲ ಕದಪು ಹಾರಗಳು ಹೊಳೆಯೆ |
ಹೊದ್ದ ಪೀತಾಂಬರವು ನೆಲಕೆ ಅಲೆಯುತಲಿ |
ಎದ್ದು ಬಂದನು ದಯಾಸಮುದ್ರ ಬಂದಂತೆ || ೩೮ ||

ಸಿಂಧುಸುತೆ ಪತಿಯೆಲ್ಲಿ ಪೋದನೋ ಎನುತ |
ಮಂದಗಮನೆಯು ಬರಲು ಪುರವೆಲ್ಲ ತೆರಳೆ ||
ವಂದಿಸದ ಗರುಡ ಗಂಧರ್ವರೊಗ್ಗಿನಲಿ |
ಅಂದಾಗ ಶಖಚಕ್ರವು ಕೂಡಿ ಬರಲು || ೩೯ ||

ಹರಿಯು ಗರುಡನನೇರಿ ಕರಿಯತ್ತ ಬರಲು |
ಹರ ಪಾರ್ವತಿಯರು ನಂದಿಯನರಿಕೊಳುತ ||
ಶಿರವ ಮೇಲಿನ ಗಂಗೆ ತುಳುಕಾಡುತಿರಲು |
ಹರ ಬಂದ ಕೈಲಾಸಪುರದಿಂದ ಇಳಿದು || ೪೦ ||

ತೊಡೆಯ ಮೇಲಿನ ಗೌರಿದೇವಿಯಳ ಸಹಿತ |
ಮುಡಿಯ ಮೇಲಿನ ಗಂಗೆ ತುಳುಕಾಡು ತಿರಲು |
ಹರಪಾರ್ವ ತಿದೇವಿ ವೃಷಭವನ್ನೇರಿ |
ಹರ ಬಂದ ಕೈಲಾಸಪುರದಿಂದ ಇಳಿದು || ೪೧ ||

ದೇವರ್ಷಿ ಬ್ರಹ್ಮರ್ಷಿ ರಾಜರ್ಷಿ ಸಹಿತ |
ದೇವಪುತ್ರಾದಿ ಸನಕಾದಿಗಳು ಕೂಡಿ ||
ಸುಮ್ಮನೇ ನಾರದನಂದು ನಡೆತಂದ |
ಧರ್ಮ ಸ್ವರೂಪವೆಲ್ಲಾ ನೆರೆದರಂದು || ೪೨ ||

ಬಂದ ಚಕ್ರವನು ಕರಕಮಲದಲಿ ತೆಗೆದು |
ಸಂಧಿಸಿಟ್ಟನು ಮಕರಿ ಹಲ್ಲು ಮುರಿವಂತೆ |
ಅಂದಾಗ ಅವನ ಶಾಪ ವಿಶ್ಯಾಪವಾಗಿ |
ಗಂಧರ್ವ ರೂಪಿನಲಿ ನಿಂತಿತಾ ಮಕರಿ || ೪೩ ||

ಹರಿಯ ಸಂದರ್ಶನವು ಮದಗಜಕೆ ಸೋಕುತಲೆ |
ಒದಗಿದವು ಶಂಖ ಚಕ್ರ ನಾಲ್ಕು ಕೈಗಳಲಿ |
ಉತ್ತ ಪಿತಾಂಬರವು ಕಿರೀಟ ಕುಂಡಲವು |
ಎಳೆತುಳಸಿಮಾಲೆಗಳು ಕೊರಳೊಳೊಪ್ಪಿದವು || ೪೪ ||

ಜಯಜಯ ಜಗನ್ನಾಥ ಜಯ ವಿಶ್ವಮೂರ್ತಿ |
ಜಯ ಜಯ ಜನಾರ್ಧನ ಜಯ ವಿಶ್ವರೂಪ |
ಜಯತು ಸರ್ವೋತ್ತಮನೆ ಕ್ಷಿರಾಬ್ಧಿಶಯನ |
ಜಯವೆಂದು ಪದಗಳಿಗೆ ಬಂದು ಎರಗಿದನು || ೪೫ ||

ಇಂದಿವನ ಭಾಗ್ಯವನು ನೋಡುವರು ಕೆಲರು |
ಇಂದಿರಾ ಪತಿಯ ಕೊಂಡಾಡುವರು ಕೆಲರು |
ಮಂದಾರ ಹೊಮಳೆಯ ಕರೆಯುತ್ತ ಸುರರಂ |
ದುಂದುಭಿ ವಾದ್ಯಗಳ ವೈಭವ ಗಳಿರಲು || ೪೬ ||

ಸಿರಿಸಹಿತ ಹರಿಯು ಗರುಡ ನೇರಿಕೊಂಡು
ಕರಿರಾಜನೊಡನೆ ವೈಕುಂಠಕ್ಕೆ ಬರಲು ||
ಹರಪಾರ್ವತಿಯರು ಕೈಲಾಸಕೆ ತೆರಳೆ |
ತರತರದ ವಾಹನಾದಿ ಸುರರು ತೆರಳಿದರು || ೪೭ ||

ಹೊತ್ತಾರೆ ಎದ್ದು ಈ ಕಥೆ ಹೇಳಿ ಕೇಳಿದವರಿಗೆ |
ದುಃಸ್ವಪ್ನ ದುರ್ಬುಧಿ ದುರ್ವ್ಯಸನ ಕಳೆವದು ||
ಸರ್ಪಾರಿ ವಾಹನನ ಧ್ಯಾನ ದೊಳಗಿರಲು |
ಸತ್ಸಂಗ ಸಾಯುಜ್ಯ ಪದವಿ ದೊರಕುಪುದು || ೪೮ ||

ಹರಿಯ ನೆನೆ ಹರಿಯ ನೆನೆ ಹರಿಯ ನೆನೆ ಮನವೆ
ಮರೆಯದಲೆ ಮಾಧವನ ನೆನೆ ಕಂಡ್ಯ ಮನವೆ |
ಹರಿಯ ನೆನೆದವರಿಗೆ ಪರಮ ಪದವಿಯು ಉಂಟು |
ಕರಿರಾಜವರದನ್ನ ಶರಣೆಂದು ಭಜಿಸು || ೪೯ ||

ಜಯತು ದ್ರುವರಾಯನಿಗೆ ವರವಿತ್ತ ದೇವ |
ಜಯತು ಪ್ರಲ್ಹಾದಭಯವಿತ್ತ ದೇವ |
ಜಯತು ದ್ರೌಪದಿಯಭಿಮಾನ ಕಾಯ್ದು ದೇವಾ
ಜಯತು ಜಯ ಹಯವದನ ಶ್ರೀವಾಸುದೇವ || ೫೦ ||

Comments

Search Hindu Devotional Topics

Contact Hindu Devotional Blog

Name

Email *

Message *